ಜಿ.ಎಸ್.ಶಿವರುದ್ರಪ್ಪ
ಹಣತೆ ಹಚ್ಚುತ್ತೇನೆ ನಾನೂ
ಈ ಕತ್ತಲನ್ನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;
ಲೆಕ್ಕವೇ ಇರದ ದೀಪಾವಳಿಯ ಹಡಗುಗಳೇ
ಇದರಲ್ಲಿ ಮುಳುಗಿ ಕರಗಿರುವಾಗ
ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಮೆ ನನಗಿಲ್ಲ
ಹಣತೆ ಹಚ್ಚುತ್ತೇನೆ ನಾನೂ
ಈ ಕತ್ತಲನ್ನು ಗೆದ್ದು ನಿಲ್ಲುತ್ತೇನೆಂಬ ಜಿದ್ದಿನಿಂದಲ್ಲ;
ಲೆಕ್ಕವೇ ಇರದ ದೀಪಾವಳಿಯ ಹಡಗುಗಳೇ
ಇದರಲ್ಲಿ ಮುಳುಗಿ ಕರಗಿರುವಾಗ
ನಾನು ಹಚ್ಚುವ ಹಣತೆ ಶಾಶ್ವತವೆಂಬ ಭ್ರಮೆ ನನಗಿಲ್ಲ
ಹಣತೆ ಹಚ್ಚುತ್ತೇನೆ ನಾನೂ;
ಈ ಕತ್ತಲಿನಿಂದ ಬೆಳಕಿನ ಕಡೆಗೆ ನಡೆದೇನೆಂಬ
ಆಸೆಯಿಂದಲ್ಲ.
ಕತ್ತಲಿನಿಂದ ಕತ್ತಲೆಗೇ ತಡಕಾಡಿಕೊಂಡು ಬಂದಿವೆ ಹೆಜ್ಜೆ
ಶತಮಾನದಿಂದಲೂ,
ಈ ಕತ್ತಲಿನಿಂದ ಬೆಳಕಿನ ಕಡೆಗೆ ನಡೆದೇನೆಂಬ
ಆಸೆಯಿಂದಲ್ಲ.
ಕತ್ತಲಿನಿಂದ ಕತ್ತಲೆಗೇ ತಡಕಾಡಿಕೊಂಡು ಬಂದಿವೆ ಹೆಜ್ಜೆ
ಶತಮಾನದಿಂದಲೂ,
ನಡುನಡುವೆ ಒಂದಷ್ಟು ಬೆಳಕು ಬೇಕೆಂದು
ಆಗಾಗ ಕಡ್ಡಿ ಗೀಚಿದ್ದೇವೆ,
ದೀಪ ಮೂಡಿಸಿದ್ದೇವೆ,
ವೇದ,ಶಾಸ್ತ್ರ,ಪುರಾಣ,ಇತಿಹಾಸ,ಕಾವ್ಯ,ವಿಜ್ಞಾನಗಳ
ಮತಾಪು-ಪಟಾಕಿ-ಸುರು ಸುರುಬತ್ತಿ-ಹೂ ಬಾಣ
ಸುಟ್ಟಿದ್ದೇವೆ.
'ತಮಸೋಮ ಜ್ಯೋತಿರ್ಗಮಯ' ಎನ್ನುತ್ತಾ ಬರೀ
ಬೂದಿಯನ್ನೇ ಕೊನೆಗೆ ಕಂಡಿದ್ದೇವೆ
ಆಗಾಗ ಕಡ್ಡಿ ಗೀಚಿದ್ದೇವೆ,
ದೀಪ ಮೂಡಿಸಿದ್ದೇವೆ,
ವೇದ,ಶಾಸ್ತ್ರ,ಪುರಾಣ,ಇತಿಹಾಸ,ಕಾವ್ಯ,ವಿಜ್ಞಾನಗಳ
ಮತಾಪು-ಪಟಾಕಿ-ಸುರು ಸುರುಬತ್ತಿ-ಹೂ ಬಾಣ
ಸುಟ್ಟಿದ್ದೇವೆ.
'ತಮಸೋಮ ಜ್ಯೋತಿರ್ಗಮಯ' ಎನ್ನುತ್ತಾ ಬರೀ
ಬೂದಿಯನ್ನೇ ಕೊನೆಗೆ ಕಂಡಿದ್ದೇವೆ
ನನಗೂ ಗೊತ್ತು,ಈ ಕತ್ತಲಿಗೆ
ಕೊನೆಯಿರದ ಬಾಯಾರಿಕೆ.
ಎಷ್ಟೊಂದು ಬೆಳಕನ್ನು ಇದು ಉಟ್ಟರೂ,ತೊಟ್ಟರೂ
ತಿಂದರೂ,ಕುಡಿದರೂ ಇದಕ್ಕೆ ಇನ್ನೂ ಬೇಕು
ಇನ್ನೂ ಬೇಕು ಎನ್ನು ಬಯಕೆ
ಕೊನೆಯಿರದ ಬಾಯಾರಿಕೆ.
ಎಷ್ಟೊಂದು ಬೆಳಕನ್ನು ಇದು ಉಟ್ಟರೂ,ತೊಟ್ಟರೂ
ತಿಂದರೂ,ಕುಡಿದರೂ ಇದಕ್ಕೆ ಇನ್ನೂ ಬೇಕು
ಇನ್ನೂ ಬೇಕು ಎನ್ನು ಬಯಕೆ
ಆದರೂ ಹಣತೆ ಹಚ್ಚುತ್ತೇನೆ ನಾನೂ;
ಕತ್ತಲೆಯನ್ನು ದಾಟುತ್ತೇನೆಂಬ ಭ್ರಮೆಯಿಂದಲ್ಲ,
ಇರುವಷ್ಟು ಹೊತ್ತು ನಿನ್ನ ಮುಖ ನಾನು,ನನ್ನ ಮುಖ ನೀನು
ನೋಡಬಹುದೆಂಬ ಒಂದೇ ಒಂದು ಆಸೆಯಿಂದ
ಹಣತೆ ಬೇಗ ಆರಿದ ಮೇಲೆ,ನೀನು ಯಾರೋ, ಮತ್ತೆ
ನಾನು ಯಾರೋ.
ಕತ್ತಲೆಯನ್ನು ದಾಟುತ್ತೇನೆಂಬ ಭ್ರಮೆಯಿಂದಲ್ಲ,
ಇರುವಷ್ಟು ಹೊತ್ತು ನಿನ್ನ ಮುಖ ನಾನು,ನನ್ನ ಮುಖ ನೀನು
ನೋಡಬಹುದೆಂಬ ಒಂದೇ ಒಂದು ಆಸೆಯಿಂದ
ಹಣತೆ ಬೇಗ ಆರಿದ ಮೇಲೆ,ನೀನು ಯಾರೋ, ಮತ್ತೆ
ನಾನು ಯಾರೋ.
************
{ ವಾಸ್ತವತೆಯನ್ನು ಪ್ರತಿಪಾದಿಸುವ ಈ ಕವಿತೆ ನಮ್ಮ ಪಠ್ಯದಲ್ಲಿದೆ. ಇದನ್ನು ಓದಿದ ನಂತರ ಯಾಕೋ ಬಹಳ ಕಾಡತೊಡಗಿತು,ಹಂಚಿಕೊಳ್ಳಬೇಕೆನಿಸಿತು. . }